ಪ್ರಜಾಸ್ತ್ರ ಸುದ್ದಿ
ನವದೆಹಲಿ: ರಾಜಸ್ಥಾನ್, ಮಧ್ಯಪ್ರದೇಶ, ಛತ್ತೀಸಗಡ ಹಾಗೂ ತೆಲಂಗಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆದಿದೆ. ಈ ನಾಲ್ಕು ರಾಜ್ಯಗಳಲ್ಲಿ ಯಾವ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ ಅನ್ನೋದು ನೋಡುವುದಾದರೆ.
ತೆಲಂಗಾಣ ಸಿಎಂ, ಬಿಆರ್ ಎಸ್ ನಾಯಕ ಕೆ.ಚಂದ್ರಶೇಖರ್ ರಾವ್ ಅವರು ಕಾಮರೆಡ್ಡಿ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ. ಗುಜ್ವಾಲ್ ನಲ್ಲಿ ಕೆಸಿಆರ್ ಮುನ್ನಡೆ ಸಾಧಿಸಿದ್ದಾರೆ.
ರಾಜಸ್ಥಾನ್ ಸಿಎಂ ಅಶೋಕ್ ಗೆಹ್ಲೋಟ್ ಸರ್ದಾರ್ಪುರ್ ಕ್ಷೇತ್ರದಲ್ಲಿ ಮುನ್ನಡೆ ಸಿದ್ದಾರೆ. ಕೈ ಹಿರಿಯ ನಾಯಕ ಸಚಿನ್ ಪೈಲೆಟ್ ಟೋಂಕ್ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಬಿಜೆಪಿ ಮಾಜಿ ಸಿಎಂ ವಸುಂಧರಾ ರಾಜ್ ಝಾಲರ್ ಪಾಠನ್ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಯ ಮತ್ತೊಬ್ಬ ನಾಯಕ ರಾಜವರ್ಧನ್ ರಾಥೋಡ್ ಹಿನ್ನಡೆ ಅನುಭವಿಸಿದ್ದಾರೆ.
ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಮಾಜಿ ಸಿಎಂ ಕಮಲನಾಥ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಛತ್ತೀಸಗಡದಲ್ಲಿ ಸಿಎಂ ಭೂಪೇಶ್ ಬಘೇಲ್ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಮಾಜಿ ಸಿಎಂ ರಮಣ್ ಸಿಂಗ್ ರಾಜನಂದಗಾಂವ್ ನಲ್ಲಿ ಮುನ್ನಡೆ ಗಳಿಸಿದ್ದಾರೆ.