ಪ್ರಜಾಸ್ತ್ರ ಸುದ್ದಿ
ವಿಜಯಪುರ: ನಮ್ಮ ಸರ್ಕಾರದಿಂದ ಕರೋನಾ ಕಾಲದಲ್ಲಿ 40 ಸಾವಿರ ಕೋಟಿ ಅಕ್ರಮ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಪಕ್ಷೀಯ ವಿರುದ್ಧದ ತಮ್ಮ ವಾಗ್ದಾಳಿ ಮುಂದುವರೆಸಿದರು.
ಯಡಿಯೂರಪ್ಪ ಮುಖ್ಯಮಂತ್ರಿಯಿದ್ದಾಗ 45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ಹಾಕಿದ್ದೀರಿ. ಬೆಂಗಳೂರಲ್ಲಿ 10 ಸಾವಿರ ಬೆಡ್ ಬಾಡಿಗೆ ಪಡೆದಿದ್ದೀರಿ. ಪ್ರತಿ ಸೋಂಕಿತರಿಗೆ 8-10 ಲಕ್ಷ ರೂಪಾಯಿ ಬಿಲ್ ಮಾಡಿದ್ದಾರೆ. ಎಲ್ಲೆಲ್ಲಿ ಲೂಟಿಯಾಗಿದೆ ಎನ್ನುವುದರ ಕುರಿತು ಶೀಘ್ರದಲ್ಲೇ ಹೊರತೆಗೆಯುತ್ತೇನೆ ಎನ್ನುವ ಮೂಲಕ ಯಡಿಯೂರಪ್ಪ ಹಾಗೂ ಅವರ ಆಪ್ತರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಶಾಸಕ ಯತ್ನಾಳ ಹೇಳಿಕೆಯ ಆಧಾರದ ಮೇಲೆ ಈಗಿನ ಕಾಂಗ್ರೆಸ್ ಸರ್ಕಾರ ತನಿಖೆಗೆ ಏನಾದರೂ ಆದೇಶ ನೀಡುತ್ತಾ? ಅಥವ ಇದೊಂದು ರಾಜಕೀಯ ಪ್ರೇರಿತ ಹೇಳಿಕೆ ಎಂದು ಸುಮ್ಮನಾಗುತ್ತಾ ಅನ್ನೋದೆ ಮುಂದಿನ ದಿನಗಳಲ್ಲಿ ತಿಳಿಯಲಿದೆ.