ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೇಂದ್ರ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಮಾಡಿದೆ. ಇದರಲ್ಲಿ ಕರ್ನಾಟಕದ ನಾಲ್ವರಿಗೆ ಸಚಿವ ಸ್ಥಾನ ನೀಡಲಾಗಿದೆ. ಸಂಸದೆ ಶೋಭಾ ಕರಂದ್ಲಾಜೆ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ರು. ಇವರ ಜೊತೆಗೆ ಭಗವಂತ ಖೂಬಾ, ಎ.ನಾರಾಯಣಸ್ವಾಮಿ ಹಾಗೂ ರಾಜ್ಯಸಭಾ ಸದಸ್ಯ ರಾಜೀವ ಚಂದ್ರಶೇಖರ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಮಾಣ ವಚನ ಬೋಧಿಸಿದ್ರು.
ಶೋಭಾ ಕರಂದ್ಲಾಜೆ ಚಿಕ್ಕಮಗಳೂರು ಸಂಸದೆ, ಎ.ನಾರಾಯಣಸ್ವಾಮಿ ಚಿತ್ರದುರ್ಗ ಸಂಸದ, ಭಗವಂತ ಖೂಬಾ ಬೀದರ ಸಂಸದ ಹಾಗೂ ರಾಜೀವ ಚಂದ್ರಶೇಖರ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಸಂಸದ. ಈ ನಾಲ್ಕು ಜನರಿಗೆ ಕೇಂದ್ರ ಮಂತ್ರಿ ಸ್ಥಾನ ಒಲಿದಿದೆ.
ಇನ್ನು 11 ಜನ ಸಚಿವರನ್ನ ಸಂಪಟದಿಂದ ಕೈ ಬಿಡಲಾಗಿದೆ. ಕರ್ನಾಟಕದ ಡಿ.ವಿ ಸದಾನಂದಗೌಡ, ಡಾ.ಹರ್ಷವರ್ಧನ, ರಾವ್ ಸಾಹೇಬ್ ದಾನ್ವೆ ಪಾಟೀಲ, ಬಾಬುಲ್ ಸುಪ್ರಿಯೋ, ಪ್ರತಾಪ ಸಾರಂಗಿ, ರಮೇಶ ಪೋಖ್ರಿಯಾಲ್, ದೇಬಾಶ್ರೀ ಚೌಧರಿ, ಸಂತೋಷ ಗಂಗ್ವಾರ್, ಥಾವರ್ ಚಂದ್ ಗೆಹ್ಲೋಟ್, ಸಂಜಯ ಶಮರಾವ್ ಧೋತ್ರೆ ಹಾಗೂ ರತನ್ ಲಾಲ್ ಕಟಾರಿಯಾ ಅವರನ್ನ ಸಂಪುಟದಿಂದ ಕೈ ಬಿಡಲಾಗಿದೆ. ಇಂದು ಒಟ್ಟು 43 ಜನ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು.