6 ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ನೀಡಿದ ಸಿಎಂ

473

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ 6 ಜನ ಪತ್ರಕರ್ತರು ಅಕಾಲಿಕವಾಗಿ ಮೃತಪಟ್ಟಿದ್ದು, ಅವರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಲಾ 5 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದ್ದಾರೆ.

ಅಕಾಲಿಕವಾಗಿ ಮೃತಪಟ್ಟ ಸೋಮಶೇಖರ ಯಡವಟ್ಟಿ, ವಿ.ಸಿ ಹಿರೇಮಠ, ಕೆ.ಎಂ ಹಾಲಪ್ಪ, ಎಸ್.ಎಚ್ ಜಯಣ್ಣ ಹಾಗೂ ಪರ್ತತಯ್ಯಸ್ವಾಮಿ ಅವರ ಕುಟುಂಬಸ್ಥರಿಗೆ ಪರಿಹಾರ ನೀಡಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮನವಿ ಮಾಡಿತ್ತು.

ಕಾನಿಪ ಸಂಘದ ಮನವಿಗೆ ಸ್ಪಂದಿಸಿದ ಸಿಎಂ ಮೃತಪಟ್ಟ 6 ಜನ ಪತ್ರಕರ್ತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!