ಪ್ರಜಾಸ್ತ್ರ ಸುದ್ದಿ
ನವದೆಹಲಿ: ದೇಶದಲ್ಲಿ ಇದೀಗ ಪಂಚ ರಾಜ್ಯಗಳ ಚುನಾವಣೆ ಕಾವು ಜೋರಾಗಿದೆ. ಇದು ಮುಗಿಯುತ್ತಿದ್ದಂತೆ ಲೋಕಸಭೆಯ ಕದನ ಶುರುವಾಗಲಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಜೋರಾಗಿ ನಡೆದಿವೆ.
ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ. ರಾಜ್ಯಸ್ಥಾನ, ಮಧ್ಯಪ್ರದೇಶ, ಛತ್ತೀಸಗಡ, ಮಿಜೋರಾಂ ಹಾಗೂ ತೆಲಂಗಾಣದಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಛತ್ತೀಸಗಡದಲ್ಲಿ 2 ಹಂತ, ಉಳಿದ ನಾಲ್ಕು ರಾಜ್ಯಗಳಲ್ಲಿ ಒಂದು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಬಹುದು ಎನ್ನಲಾಗುತ್ತಿದೆ.
ರಾಜ್ಯಸ್ಥಾನ, ಛತ್ತೀಸಗಡದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ, ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಹಾಗೂ ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ ಪಕ್ಷಗಳ ಸರ್ಕಾರವಿದೆ. ಈ ವಿಧಾನಸಭಾ ಚುನಾವಣೆಯ ಗೆಲುವು ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.