ಕಲುಷಿತ ನೀರು ಕುಡಿದು 50 ಜನ ಅಸ್ವಸ್ಥ

382

ಕಲಘಟಗಿ: ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ತುಮ್ಮರಿಕೊಪ್ಪ ಗ್ರಾಮದ ಜನರು ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರನ್ನ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ಬೋರ್ ವೆಲ್ ನೀರು ಬಿಟ್ಟಿದ್ದು, ಗ್ರಾಮಸ್ಥರು ಆ ನೀರು ಕುಡಿದ ಬಳಿಕ ಏಕಾಏಕಿ ಸುಮಾರು 30ರಿಂದ 50 ಜನ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ಸಾಗಿಸಲಾಗಿದೆ. ಪೈಪ್ ಲೈನ್ ಒಡೆದು ನೀರು ಕಲುಷಿತಗೊಂಡಿದೆ. ಆ ನೀರನ್ನ ಗ್ರಾಮಸ್ಥರು ಕುಡಿದು ಅಸ್ವಸ್ಥಗೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ನಿಂಬಣ್ಣವರ

ಆಸ್ಪತ್ರೆಗೆ ಆಗಮಿಸಿದ ಶಾಸಕ ಸಿ.ಎಂ.ನಿಂಬಣ್ಣವರ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ಜನರ ಆರೋಗ್ಯ ವಿಚಾರಿಸಿದ್ರು. ಬಳಿಕ ಈ ವಿಷಯವನ್ನ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಸೂಚಿಸಿದ್ರು.




Leave a Reply

Your email address will not be published. Required fields are marked *

error: Content is protected !!