ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಕಳೆದ ರಾತ್ರಿ ವಶಕ್ಕೆ ಪಡೆಯಲಾಗಿದೆ. ಬೈಂದೂರು ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವರು ಚೈತ್ರಾ ಸೇರಿ ಇಬ್ಬರ ವಿರುದ್ಧ ವಂಚನೆಯ ಆರೋಪ ಮಾಡಿದ್ದಾರೆ. ಈ ಸಂಬಂಧ ಪೊಲೀಸರಿಗೆ 8 ಮಂದಿ ವಿರುದ್ಧ ದೂರು ನೀಡಿದ್ದರು. ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆ ನಡೆಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ.
ಕೇಂದ್ರ ಬಿಜೆಪಿ ನಾಯಕರು, ಆರ್ ಎಸ್ಎಸ್ ನಾಯಕರ ಹೆಸರಿನಲ್ಲಿ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆಯಂತೆ. ಚೈತ್ರಾ ಕುಂದಾಪುರ, ಶ್ರೀಕಾಂತ್ ನಾಯಕ್, ಗಗನ್ ಕಡೂರ್, ಪ್ರಸಾದ್ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.