7 ಜನ ಅಂತರ್ ರಾಜ್ಯ ಕಳ್ಳರ‌ ಬಂಧನ: ಎಸ್ಪಿ ಆನಂದ್ ಕುಮಾರ್

259

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ, ಅವಳಿ ಜಿಲ್ಲೆಯ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಜಯಪುರ ನಗರ, ಜಿಲ್ಲೆ ಸೇರಿದಂತೆ ಪಕ್ಕದ ಬಾಗಲಕೋಟೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ, ರಮೇಶ ಕಾಳೆ, ಸುರೇಶ ಚವ್ಹಾಣ, ಪರಶುರಾಮ ಕಾಳೆ, ಕಿರಣ ಬೇಡಕೇರ, ದೇವದಾಸ್ ಚವ್ಹಾಣ, ತನ್ವೀರ್ ಹೊನ್ನುಟಗಿ, ದಶರಥ ಹೊಸಮನಿ ಸೇರಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

ಬಂಧಿತರಿಂದ 16 ಲಕ್ಷ ಮೌಲ್ಯದ 360 ಗ್ರಾಂ ಚಿನ್ನ, 200 ಗ್ರಾಂ ಬೆಳ್ಳಿ, ಒಂದು ಬೊಲೇರೋ ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ ಎಂದರು.




Leave a Reply

Your email address will not be published. Required fields are marked *

error: Content is protected !!