ಕೋವಿಡ್ ನಿಂದ 7 ಜನರ ಸಾವು

121

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇತ್ತೀಚೆಗೆ ಕೋವಿಡ್ ನಿಂದಾಗಿ 7 ಜನರು ಮೃತಪಟ್ಟಿದ್ದಾರೆ. ಅದರಲ್ಲಿ ನಾಲ್ವರು ಲಸಿಕೆ ಪಡೆದಿರಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮೃತಪಟ್ಟ ಮೂವರಲ್ಲಿ ಜೆಎನ್-1 ತಳಿಯ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಮುನ್ನೆಚ್ಚರಿಕೆ ಕ್ರಮಗಳ ಕುರಿತು ಇನ್ನಷ್ಟು ಮಾಹಿತಿ ಕಲೆ ಹಾಕಲು ನಿರ್ಧರಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಕಾರ್ಯಕರ್ತರಿಗೆ ಫ್ಲೂ ಲಸಿಕೆ ಹಾಕಲು ತೀರ್ಮಾನಿಸಲಾಗಿದೆ. 30 ಸಾವಿರ ಡೋಸ್ ಲಸಿಕೆಗಾಗಿ ಕೇಂದ್ರವನ್ನು ಕೇಳಲಾಗುವುದು ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!