72ನೇ ಗಣರಾಜ್ಯೋತ್ಸವ: ರಾಷ್ಟ್ರಪತಿಗಳಿಂದ ಧ್ವಜಾರೋಹಣ

362

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದ ತುಂಬಾ 72ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ರಾಷ್ಟ್ರ ರಾಜಧಾನಿಯ ರಾಜಪಥ್ ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದ್ರು. ಈ ವೇಳೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ಮೋದಿ ಹಾಗೂ ಮೂರು ರಕ್ಷಣಾ ಪಡೆಗಳ ಮುಖ್ಯಸ್ಥರು ಉಪಸ್ಥಿತರಿದ್ರು.

ಇದೆ ವೇಳೆ ನಡೆದ ಪರೇಡ್ ನಲ್ಲಿ 122 ಬಾಂಗ್ಲಾ ಸೈನಿಕರು ಸಹ ಪಥಸಂಚನಲ ನಡೆಸಿದ್ರು. ಯಾಕಂದ್ರೆ ಬಾಂಗ್ಲಾ ವಿಮೋಚನೆಗೊಂಡು 50 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ವಿಶೇಷ ಗೌರವ ಸಲ್ಲಿಸಲಾಯ್ತು.

ಇದೇ ವೇಳೆ ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳ ಪಥಸಂಚಲನ ನಡೆಯಿತು. ಇದರಲ್ಲಿ ಕರ್ನಾಟಕದಿಂದ ವಿಜಯನಗರ ಸಾಮ್ರಾಜ್ಯದ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆಯಿತು.




Leave a Reply

Your email address will not be published. Required fields are marked *

error: Content is protected !!