ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕೋವಿಡ್ 19 ಹಾವಳಿಯಿಂದಾಗಿ ಜಿಲ್ಲೆಯಾದ್ಯಂತ ಸರಳವಾಗಿ 72ನೇ ಗಣರಾಜ್ಯೋತ್ಸವ ಆಚರಿಸಲಾಯ್ತು. ಅದರಂತೆ ನಗರದ ವಿಜಯಪುರ ಹೊರವಲಯದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ ಅಗರ್ವಾಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ರು.
ಇನ್ನು ಸಿಂದಗಿ ತಾಲೂಕಿನಲ್ಲಿಯೂ ಸರಳವಾಗಿ ಗಣರಾಜ್ಯೋತ್ಸವ ಆಚರಿಸಲಾಯ್ತು. ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಯ್ತು. ಈ ವೇಳೆ ಕರೋನಾ ವಾರಿಯರ್ಸ್ ಗಳಿಗೆ ಸನ್ಮಾನಿಸಲಾಯ್ತು. ತಹಶೀಲ್ದಾರ್ ಸಂಜೀವಕುಮಾರ ದಾಸರ ಪ್ರಾಸ್ತಾವಿಕವಾಗಿ ಮಾತ್ನಾಡಿದ್ರು.
ಶಾಸಕ ಎಂ.ಸಿ ಮನಗೂಳಿ ಅವರ ಅನುಪಸ್ಥಿತಿಯಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ ಶಾಹಪೂರ ಅಧ್ಯಕ್ಷತೆ ವಹಿಸಿಕೊಂಡು ಮಾತ್ನಾಡಿದ್ರು. ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ ಸೇರಿದಂತೆ ಇತರರು ಗಣರಾಜ್ಯೋತ್ಸವ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ರು.
ಈ ವೇಳೆ ಸಿಪಿಐ ಎಚ್.ಎಂ ಪೇಟಲ, ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ, ತಾಲೂಕು ಪಂಚಾಯ್ತಿ ಅಧ್ಯಕ್ಷೆ ಮಾನಂದಾ ಸಾಲಕ್ಕಿ, ಉಪಾಧ್ಯಕ್ಷ ಸಂಜೀವಕುಮಾರ ಎಂಟಮಾನ, ಎಪಿಎಂಸಿ ಅಧ್ಯಕ್ಷ ಗೋಲ್ಲಾಳಪ್ಪ ರೂಗಿ, ಉಪಾಧ್ಯಕ್ಷ ಪ್ರಕಾಶ ಪಡಶೆಟ್ಟಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಪುರಸಭೆ ಉಪಾಧ್ಯಕ್ಷ ಹಾಸೀಂ ಆಳಂದ ಸೇರಿದಂತೆ ಅನೇಕರು ಭಾಗವಹಿಸಿದ್ರು. ಶಿಕ್ಷಕ ಸಿದ್ಧಲಿಂಗ ಚೌಧರಿ ನಿರೂಪಿಸಿದ್ರು.