ಪ್ರಜಾಸ್ತ್ರ ಸುದ್ದಿ
ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದೇಶದ ತುಂಬಾ ಅಮೃತ ಮಹೋತ್ಸವ ಆಚರಣೆ ಮಾಡಲಾಗುತ್ತಿದೆ. ಅಲ್ಲದೆ ಇಂದಿನಿಂದ ಮೂರು ದಿನಗಳ ಕಾಲ ಪ್ರತಿಯೊಬ್ಬರ ಮನೆ ಮೇಲೆ ತ್ರಿವರ್ಣಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ ಕೊಟ್ಟಿದ್ದು, ಅದರಂತೆ ಎಲ್ಲೆಡೆ ತ್ರಿವರ್ಣಧ್ವಜ ಹಾರಾಡುತ್ತಿದೆ.
ಸರ್ಕಾರಿ ಕಚೇರಿಗಳ ಮೇಲೆ ಮೂರು ದಿನಗಳ ಕಾಲ ಬೆಳಗ್ಗೆ ಧ್ವಜ ಹಾರಿಸುವುದು, ಸಂಜೆ ಇಳಿಸುವುದು. ಆದರೆ, ಸಾರ್ವಜನಿಕರು ತಮ್ಮ ಮನೆಯ ಮೇಲೆ ಮೂರು ದಿನಗಳ ಕಾಲ ಧ್ವಜ ಸತತವಾಗಿ ಹಾರಿಸುವುದು, ಆಗಸ್ಟ್ 15ರ ಸಂಜೆ ಇಳಿಸುವುದು. ಈ ಮೂಲಕ 75 ವರ್ಷಗಳ ಸ್ವಾತಂತ್ರ್ಯೋತ್ಸವನ್ನು ಆಚರಿಸುವ ಮೂಲಕ, ದೇಶಕ್ಕಾಗಿ ಪ್ರಾಣ ಬಲಿದಾನ ಮಾಡಿದ ಪ್ರತಿಯೊಬ್ಬರನ್ನು ಸ್ಮರಿಸಿಕೊಳ್ಳುವುದಾಗಿದೆ.