ಪ್ರಜಾಸ್ತ್ರ ಸುದ್ದಿ
ನವದೆಹಲಿ: ಸ್ವಾತಂತ್ರ್ಯ ಸಿಕ್ಕು 75 ವರ್ಷಗಳ ಹಿನ್ನೆಲೆಯಲ್ಲಿ ಆಝಾದಿ ಕಾ ಅಮೃತಮಹೋತ್ಸವ ಆಚರಿಸಲಾಗುತ್ತಿದೆ. ಹೀಗಾಗಿ ಆಗಸ್ಟ್ 2ರಿಂದ 15ರ ತನಕ ನಿಮ್ಮ ಸೋಷಿಯಲ್ ಮೀಡಿಯಾ ಪ್ರೊಫೈಲ್ ಗೆ ತ್ರಿವರ್ಣಧ್ವಜ ಬಳಸಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಾಸಿಕ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಈ ಮಾತು ಹೇಳಿದರು.
ಸ್ವಾತಂತ್ರ್ಯ ಸಿಕ್ಕು 75 ವರ್ಷಗಳ ಹಿನ್ನೆಲೆಯಲ್ಲಿ ಪ್ರತಿ ಮನೆಯ ಮೇಲೆ ಬಾವುಟ ಹಾರಿಸುವ ಆಂದೋಲನಕ್ಕೆ ಆಯೋಜಿಸಲಾಗಿದೆ. ಆಗಸ್ಟ್ 2, ನಮ್ಮ ರಾಷ್ಟ್ರಧ್ವಜ ವಿನ್ಯಾಸಗೊಳಿಸಿದ ಪಿಂಗಲಿ ವೆಂಕಯ್ಯ ಅವರ ಜನ್ಮದಿನ. ಹಾಗೇ ಮಹಾನ್ ಕ್ರಾಂತಿಕಾರಿ ಮೇಡಂ ಕಾಮಾ ಅವರನ್ನು ನೆನಪಿಸಿಕೊಳ್ಳುವ ನಿಟ್ಟಿನಲ್ಲಿ ಆಗಸ್ಟ್ 2ರಿಂದ 15ರತನಕ ತಮ್ಮ ಸೋಷಿಯಲ್ ಮೀಡಿಯಾ ಪ್ರೊಫೈಲ್ ಗೆ ರಾಷ್ಟ್ರಧ್ವಜ ಬಳಸಲು ಕರೆ ಕೊಟ್ಟಿದ್ದಾರೆ.