ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ

191

ಪ್ರಜಾಸ್ತ್ರ ಸುದ್ದಿ

ನವದೆಹಲಿ: ತ್ಯಾಗ, ಬಲಿದಾನ ನಿರಂತರ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಭಾರತವು 75 ವರ್ಷಗಳ ಸ್ವಾತಂತ್ರ್ಯ ಪೂರೈಸುವ ಸಂದರ್ಭದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. 9ನೇ ಬಾರಿ ದೆಹಲಿಯ ಕೆಂಪು ಕೋಟೆಯ ಮೇಲೆ ಧ್ವಜಾರೋಹರಣ ನೆರವೇರಿಸಿ ಮಾತನಾಡಿದರು.

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಡಾ.ರಾಜೇಂದ್ರ ಪ್ರಸಾದ್, ನೆಹರು ಜಿ, ಸರ್ದಾರ್ ಪಟೇಲ್, ಲಾಲ್ ಬಾಹದ್ದೂರ್ ಶಾಸ್ತ್ರಿ, ಸುಭಾಷ್ ಚಂದ್ರ ಬೋಸ್, ಡಾ.ಬಿ.ಆರ್ ಅಂಬೇಡ್ಕರ್ ಜೆ.ಪಿ.ನಾರಾಯಣ್, ಆರ್.ಎಂ.ಲೋಹಿಯಾ, ವಿನೋಬಾ ಭಾವೆ, ನಾನಾಜಿ ದೇಶಮುಖ್, ಸುಬ್ರಮಣ್ಯ ಭಾರತಿ ಇದು ಅಂತಹ ಮಹಾನ್ ವ್ಯಕ್ತಿಗಳ ಮುಂದೆ ತಲೆಬಾಗುವ ದಿನವಾಗಿದೆ ಎಂದು ಸ್ಮರಿಸಿಕೊಂಡರು.

ಅಲ್ಲದೆ ರಾಣಿ ಲಕ್ಷ್ಮಿಬಾಯಿ, ಝಲ್ಕರಿ ಬಾಯಿ, ಚೆನ್ನಮ್ಮ, ಬೇಗಂ ಹಜರತ್ ಮಹಲ್, ಯುವ ಪಡೆಯಾದ ಮಂಗಲ್ ಪಾಂಡೆ, ತಾತ್ಯಾ ಟೋಪೆ, ಭಗತ್ ಸಿಂಗ್, ಸುಖದೇವ್, ರಾಜಗುರು, ಚಂದ್ರಶೇಖರ್ ಆಜಾದ್, ಅಶ್ಫಾಕುಲ್ಲಾ ಖಾನ್, ರಾಮ್ ಪ್ರಸಾದ್ ಬಿಸ್ಮಿಲ್ ಅವರ ಬಲಿದಾನವನ್ನು ಕೊಂಡಾಡಿದರು.




Leave a Reply

Your email address will not be published. Required fields are marked *

error: Content is protected !!