ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಸಂವಿಧಾನದಿಂದ ಎಲ್ಲರಿಗೂ ಸ್ವಾತಂತ್ರ್ಯ, ಸಮಾನತೆ ಸಿಕ್ಕಿದೆ. ದೇಶದ ಏಕತೆ ಜೊತೆಗೆ ಸ್ವಾಭಿಮಾನದ ಜೀವನ ನಡೆಸಬೇಕು ಎಂದರು.
75 ವರ್ಷಗಳಲ್ಲಿ ಕರ್ನಾಟಕ ಸಾಕಷ್ಟು ಪ್ರಗತಿ ಸಾಧಿಸಿದೆ. ಇನ್ನು ಹೆಚ್ಚಿನ ರೀತಿಯಲ್ಲಿ ಸಮಗ್ರ ಅಭಿವೃದ್ಧಿಗೆ ಒಟ್ಟಾಗಿ ಎಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದರು. ರಾಜ್ಯ ಸರ್ಕಾರ ನೀಡಿದ್ದ 5 ಗ್ಯಾರೆಂಟಿಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆಯ ಮೂಲಕ ಮಹಿಳಾ ಸಬಲೀಕರಣಕ್ಕೆ ಹೊಸ ಹೆಜ್ಜೆ ಇಟ್ಟಿದೆ. ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಯೋಜನೆಯೊಂದಿಗೆ ಸರ್ಕಾರ ತನ್ನ ಬದ್ಧತೆ ತೋರಿಸಿದೆ ಅಂತಾ ಶ್ಲಾಘಿಸಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.