ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯಕ್ಕೆ ಬಲ: ಸಿಎಂ ಬಿಎಸ್ವೈ

208

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಸಂಕಷ್ಟ ಕಾಲದಲ್ಲಿಯೂ ಯೋಗದ ಪಾತ್ರ ಮಹತ್ವವಾಗಿದೆ. ಯೋಗದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಲಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಆಯುಷ್ ಇಲಾಖೆಯ ಸಹಯೋಗದಿಂದಿಗೆ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತ್ನಾಡಿದ್ರು. ವ್ಯಕ್ತಿತ್ವ ವಿಕಾಸ, ಏಕಾಗ್ರತೆಯ ಜೊತೆಗೆ ಸಮಾಜ ನಿರ್ಮಾಣದಲ್ಲಿಯೂ ಯೋಗ ಸಹಕಾರಿಯಾಗಿದೆ. ಯೋಗ, ವ್ಯಾಯಾಮಗಳು ನಮ್ಮ ಜೀವನಕ್ರಮಗಳಾಗಿರಲಿ ಎಂದು ಸಲಹೆ ನೀಡಿದರು.

ಈ ವೇಳೆ ಆರೋಗ್ಯ ಸಚಿವ ಡಾ.ಕೆ ಸುಧಾಕರ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!