7ನೇ ವೇತನ ಆಯೋಗ ರಚನೆಗಾಗಿ ಧರಣಿ

250

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ 7ನೇ ವೇತನ ಆಯೋಗ ರಚನೆ ಪಡಿಸುವ ಹಾಗೂ ನೌಕರ ವಿರೋಧಿ ಆಡಳಿತ ಸುಧಾರಣೆಗಳ ಶಿಫಾರಸ್ಸುಗಳನ್ನು ಕೈಬಿಡಲು ಒತ್ತಾಯಿಸವ ಸಂಬಂಧ, ಗುರುವಾರ ಧರಣಿ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರಿ ನೌಕರರ ವಿವಿಧ ಇಲಾಖಾ ಮತ್ತು ವೃಂದ ಸಂಘಟನೆಗಳ ಒಕ್ಕೂಟ ಜಂಟಿ ಕ್ರಿಯಾ ಸಮಿತಿಯಿಂದ ಧರಣಿ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಬಹುಮಹಡಿ ಕಟ್ಟಡದ ಮುಂಭಾಗದಲ್ಲಿ ರಾಜ್ಯ ಮಟ್ಟದ ಧರಣಿಯನ್ನು ಸೆಪ್ಟೆಂಬರ್ 29ರಂದು ನಡೆಸಲು ಸಜ್ಜಾಗಿದೆ. ಅಂದು ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ಮಾತನಾಡಲಿದ್ದಾರೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಹೆಚ್.ಎಸ್ ಜೈಕುಮಾರ್, ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ, ಕರ್ನಾಟ ರಾಜ್ಯ ಎನ್ ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ತೇಜ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!