ಕಲಬುರಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ. ಫೆಬ್ರವರಿ 5, 6 ಹಾಗೂ 7ರಂದು ನಡೆಯುವ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ನಾಳೆ ಚಾಲನೆ ಸಿಗಲಿದೆ.
ನಾಳೆ ಬೆಳಗ್ಗೆ 11.30ಕ್ಕೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಗುದ್ದಲಿ ಪೂಜೆ ನಡೆಸುವ ಮೂಲಕ ವೇದಿಕೆ ಕೆಲಸಕ್ಕೆ ಚಾಲನೆ ನೀಡಲಾಗ್ತಿದೆ. ಈ ವೇಳೆ ಸಮ್ಮೇಳನಕ್ಕೆ ಸಂಬಂಧಿಸಿದ ಪದಾಧಿಕಾರಿಗಳು, ರಾಜಕೀಯ ಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕರಾಗಿರುವ ಜಿಲ್ಲಾಧಿಕಾರಿ ಶರತ ಬಿ ತಿಳಿಸಿದ್ದಾರೆ.
ವೇದಿಕೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಂದು ಗುದ್ದಲಿ ಪೂಜೆ ನಡೆಯಬೇಕಿತ್ತು. ಕೆಲ ಅನಿವಾರ್ಯ ಕಾರಣಗಳಿಂದ ನಾಳೆಗೆ ಮುಂದೂಡಲಾಗಿದೆ. ಹೀಗಾಗಿ ನಾಳೆ ಬೆಳಗ್ಗೆ ವೇದಿಕೆ ನಿರ್ಮಾಣಕ್ಕೆ ಕೆಲಸಕ್ಕೆ ಚಾಲನೆ ಸಿಗಲಿದೆ.