ಸಾಂಗ್ಲಿ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ರಕ್ಷಣಾ ತಂಡದ ದೋಣಿ ಮುಳುಗಿ 9 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಖಾಸಗಿ ರಕ್ಷಣಾ ತಂಡವೊಂದು ಸುಮಾರು 31 ಜನರನ್ನ ರಕ್ಷಿಸಿ ಕರೆದುಕೊಂಡು ಬರುತ್ತಿದ್ದಾಗ, ಪಾಲಸ್ ತೆಹಸಿಲ್ ನಲ್ಲಿರುವ ಬ್ರಹ್ಮಾನಲ್ ಗ್ರಾಮದ ಬಳಿ ಈ ಒಂದು ದುರಂತ ಸಂಭವಿಸಿದೆ ಎಂತಾ ಪುಣೆ ವಿಭಾಗೀಯ ಆಯುಕ್ತ ದೀಪಕ ಮೈಸೇಕರ್ ತಿಳಿಸಿದ್ದಾರೆ.
ಇಲ್ಲಿಯವರೆಗೂ 9 ಮೃತದೇಹಗಳನ್ನ ಹೊರ ತೆಗೆಯಲಾಗಿದೆ. ದೋಣಿ ಮುಗಿಚಿದ್ಮೇಲೆ 15 ಜನ ಈಜಿ ದಡ ಸೇರಿದ್ದಾರೆ. ಇನ್ನು ನಾಪತ್ತೆಯಾದವರ ಪತ್ತೆಗಾಗಿ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಕಳೆದೊಂದು ವಾರದಲ್ಲಿ ಸುಮಾರು 16 ಜನ ಪ್ರಾಣ ಕಳೆದುಕೊಂಡಿದ್ದಾರೆ. 1.32 ಲಕ್ಷ ಜನರನ್ನ ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗಿದೆ.