ಪ್ರಜಾಸ್ತ್ರ ಸುದ್ದಿ
ವಿಜಯಪುರ: ನದಿಯಲ್ಲಿ ಈಜಲು ಹೋದ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ತಾರಾಪುರ ಗ್ರಾಮದಲ್ಲಿ ನಡೆದಿದೆ. ಸುಧಾಕರ ಗುರಪ್ಪ ವಡ್ಡರ( 9) ಮೃತ ಬಾಲಕ ಎಂದು ತಿಳಿದು ಬಂದಿದೆ.
ಗೆಳೆಯರ ಜೊತೆಗೆ ತಾರಾಪುರ ಗ್ರಾಮದ ಹತ್ತಿರ ಇರುವ ಭೀಮಾನದಿಯಲ್ಲಿ ಈಜಲು ಹೋಗಿದ್ದ ವೇಳೆಯಲ್ಲಿ ಈಜಲು ಬಾರದೇ ಅಸುನೀಗಿದ್ದಾನೆ. ವಿಷಯ ತಿಳಿದ ಮೇಲೆ ಸ್ಥಳಕ್ಕೆ ಹೋದ ಗ್ರಾಮಸ್ಥರು ಬಾಲಕನ ಶವ ಹೊರತೆಗೆದಿದ್ದಾರೆ. ಈ ಕುರಿತು ಆಲಮೇಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.