ಶಿವಮೊಗ್ಗ: ರಾಜ್ಯದ ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೃಷಿ ಸಚಿವ ಬಿ.ಸಿ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯ್ತು. ತೆಲಂಗಾಣ ಮಾದರಿಯಲ್ಲಿ ರಾಜ್ಯದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಲಾಗಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 6 ಸಾವಿರ, ರಾಜ್ಯ ಸರ್ಕಾರದ 4 ಸಾವಿರ ರೂಪಾಯಿ ಜೊತೆಗೆ 10 ಸಾವಿರ ಸೇರಿಸಿ 20 ಸಾವಿರ ನೀಡಬೇಕೆಂದು ಒತ್ತಾಯಿಸಲಾಗಿದೆ. ಇನ್ನು ಕನಿಷ್ಠ ಬೆಲೆ ಯೋಜನೆಯಡಿ ಧಾನ್ಯ ಖರೀದಿಸಬೇಕು. ಎಲ್ಲ ಬೆಳೆಗಳಿಗೆ ಬಡ್ಡಿ ರಹಿತ ಅಡಮಾನ ಸಾಲ ನೀಡಬೇಕು. ಕೃಷಿ ಉತ್ಪನ ಸಾಗಿಸಲು ವ್ಯವಸ್ಥೆ ಮಾಡಬೇಕು. ಹೀಗೆ ಹಲವು ಪ್ರಮುಖ ಬೇಡಿಕೆಗಳನ್ನ ಕೃಷಿ ಸಚಿವರಿಗೆ ಸಲ್ಲಿಸಲಾಗಿದೆ. ಈ ವೇಳೆ ರೈತ ಸಂಘದ ಮುಖಂಡರಾದ ಹೆಚ್.ಆರ್ ಬಸವರಾಜಪ್ಪ ಹಲವರು ಉಪಸ್ಥಿತರಿದ್ರು.