ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಸೋಮಜಾಳ ಗ್ರಾಮದವರಾದ ಶಿವಾನಂದ ಪಾಟೀಲ ಸೋಮಜಾಳ ಅವರು, ಬೆಳೆದ ರೀತಿ ಅದ್ಭುತ. ಪುಟ್ಟ ಗ್ರಾಮದಲ್ಲಿ ಹುಟ್ಟಿ, ದೇಶ ಕಾಯುವ ಯೋಧರಾಗಿ ಸೇವೆ ಸಲ್ಲಿಸಿದವರು. ಬಳಿಕ ಧಾರವಾಡದಲ್ಲಿ ಜಿ.ಆರ್ ಗ್ರೂಪ್ ಅನ್ನೋ ಸಂಸ್ಥೆ ಹುಟ್ಟು ಹಾಕಿ, ರಾಜ್ಯದ ಮೂಲೆ ಮೂಲೆಗೂ ಸೆಕ್ಯೂರಿಟಿ ಗಾರ್ಡ್ಸ್ ಒದಗಿಸುತ್ತಿರುವವರು.
ಸಾಮಾಜಿಕ ಕಳಕಳಿಯನ್ನ ಹೊಂದಿರುವ ಇವರು, ಸಿಂದಗಿ ತಾಲೂಕಿನಲ್ಲಿ ಸಾಕಷ್ಟು ಸಮಾಜಮುಖಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಕರೋನಾ ಲಾಕ್ ಡೌನ್ ಹೊತ್ತಿನಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಈ ಭಾಗದ ಬಡವರು, ನಿರ್ಗತಿಕರು, ಪೌರ ಕಾರ್ಮಿಕರಿಗೆ ಅಗತ್ಯ ವಸ್ತುಗಳನ್ನ ನೀಡಿದ್ದಾರೆ. ಇವರು ಪ್ರಜಾಸ್ತ್ರ ಮೊದಲ ವಾರ್ಷಿಕೋತ್ಸವಕ್ಕೆ ಶುಭ ಕೋರಿದ್ದಾರೆ.