ಪ್ರಜಾಸ್ತ್ರ ಸುದ್ದಿ
ನವದೆಹಲಿ: ಬಿಜೆಪಿ ಯುವ ಲೀಡರ್ ಜ್ಯೋತಿರಾದಿತ್ಯ ಸಿಂಧಿಯಾ ಇಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ನೊಳಗಿನ ಭಿನ್ನಾಭಿಪ್ರಾಯದಿಂದ ಬಹುವರ್ಷಗಳ ಸಂಬಂಧಕ್ಕೆ ಗುಡ್ ಬೈ ಹೇಳಿ, ತಮ್ಮ ಆಪ್ತರೊಂದಿಗೆ ಬಿಜೆಪಿ ಸೇರಿದ್ರು.
ಪ್ರಮಾಣ ವಚನಕ್ಕೂ ಮೊದ್ಲು ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ದಿಗ್ವಿಜಯ ಸಿಂಗ್ ಅವರಿಗೆ ನಮಸ್ಕರಿಸಿದರು. ಬಿಜೆಪಿ ಸೇರಿದ ಸಿಂಧಿಯಾರನ್ನ ರಾಜ್ಯಸಭಾ ಟಿಕೆಟ್ ನೀಡಿ ಬಿಜೆಪಿ ಗೆಲ್ಲಿಸಿದೆ. ಮುಂದಿನ ದಿನಗಳಲ್ಲಿ ಅವರಿಗೆ ಕೇಂದ್ರ ಸಚಿವ ಸ್ಥಾನ ಸಿಗುತ್ತಾ ಅನ್ನೋ ಪ್ರಶ್ನೆ ಮೂಡಿದೆ.