ಸಾಹಿತ್ಯ ಮತ್ತು ರಂಗಭೂಮಿ ವಿಭಾಗ
ಬಳ್ಳಾರಿ: ಕೊಟ್ಟೂರು ತಾಲೂಕಿನ ಕೋಗಳಿ ಗ್ರಾಮದ ರಂಗಭೂಮಿ ಹಿರಿಯ ಕಲಾವಿದ ಕೋಗಳಿ ಪಾಪಣ್ಣ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 78 ವರ್ಷದ ಪಾಪಣ್ಣ ಇಂದು ನಿಧನರಾಗಿದ್ದಾರೆ.
ಕಿರಿಯ ವಯಸ್ಸಿನಲ್ಲಿ ನಾಟಕದತ್ತ ಒಲವು ಬೆಳಸಿಕೊಂಡು ಅದರಲ್ಲಿಯೇ ಬದುಕು ಕಟ್ಟಿಕೊಂಡಿದ್ದ ಇವರು, ರಾಜ್ಯ ರಾಷ್ಟ್ರಮಟ್ಟದಲ್ಲಿ ನಾಟಕಗಳನ್ನ ಮಾಡಿದ್ದಾರೆ. ಹೇಮರೆಡ್ಡಿ ಮಲ್ಲಮ್ಮ, ರಕ್ತರಾತ್ರಿ ಸೇರಿದಂತೆ ಹಲವು ನಾಟಕಗಳನ್ನ ಮಾಡಿದ್ದಾರೆ. ಇವರ ರಂಗಭೂಮಿ ಸಾಧನೆಗೆ ನಾಟಕ ಅಕಾಡಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ.
ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಅಂತ್ಯ ಸಂಸ್ಕಾರ ಹುಟ್ಟೂರಾದ ಕೋಗಳಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಆಪ್ತರು ತಿಳಿಸಿದ್ದಾರೆ.