ಎಸ್ಟಿ ಪ್ರಮಾಣ ಪತ್ರಕ್ಕಾಗಿ ತಳವಾರ ಸಮಾಜದಿಂದ ವಿಜಯಪುರದಲ್ಲಿ ಧರಣಿ

269

ಪ್ರಜಾಸ್ತ್ರ ಸುದ್ದಿ

ವಿಜಯಪುರ: ತಳವಾರ ಹಾಗೂ ಪರಿವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಇಂದನಿಂದ ಧರಣಿ ನಡೆಸಲಾಗ್ತಿದೆ. ಎಸ್ಟಿ ಜಾತಿ ಪ್ರಮಾಣ ಪತ್ರ ನೀಡುವ ತನಕ ಅನಿರ್ದಿಷ್ಟಾವಧಿ ಧರಣಿ ನಡೆಸಲು ಮುಂದಾಗಿದ್ದಾರೆ.

ಈ ವೇಳೆ ಮಾತ್ನಾಡಿದ ಸಮಾಜದ ಮುಖಂಡರು, ಜಾತಿ ಪ್ರಮಾಣ ಪತ್ರ ನೀಡಲು ಕೂಡಲೇ ಸರ್ಕಾರ ಆದೇಶ ನೀಡಬೇಕು. ಇಲ್ಲವಾದ್ರೆ ಮುಂದಾಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಹೇಳಲಾಯ್ತು.

ಇದೆ ರೀತಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಹ ಇಂದಿನಿಂದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!