ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟಕ್ಕೆ ನೂತನವಾಗಿ 7 ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ 7 ಮಂತ್ರಿಯಾಗಿದ್ದಾರೆ.
ಮಧ್ಯಾಹ್ನ 3.50ರ ನಂತರ ರಮೇಶ ಕತ್ತಿ, ಎಸ್.ಅಂಗಾರ, ಸಿ.ಪಿ ಯೋಗೇಶ್ವರ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ, ಆರ್.ಶಂಕರ ಹಾಗೂ ಮುರುಗೇಶ ನಿರಾಣಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರ ಪ್ರತಿಜ್ಞಾ ವಿಧಿ ಬೋಧಿಸಿದ್ರು.
ಈ ಮೂಲಕ ಇಷ್ಟು ದಿನಗಳ ಕಾಲ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟದ್ದವರಿಗೆ ಖುಷಿಯಾಗಿದೆ. ಇದರ ಜೊತೆಗೆ ಎಂ.ಪಿ ರೇಣುಕಾಚಾರ್ಯ, ಹೆಚ್.ವಿಶ್ವನಾಥ ಸೇರಿದಂತೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.