ಪ್ರಜಾಸ್ತ್ರ ಸುದ್ದಿ
ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನ ಧಾರವಾಡ ಕೋರ್ಟ್ ವಜಾಗೊಳಿಸಿದೆ. ಇದ್ರಿಂದಾಗಿ ಮಾಜಿ ಸಚಿವರಿಗೆ ಜೈಲೇ ಗತಿಯಾಗಿದೆ. ಹೀಗಾಗಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ.
ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದಾರೆ. ಈ ಸಂಬಂದ ಜಾಮೀನು ಅರ್ಜಿ ಸಲ್ಲಸಿದ್ರು. ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ನ್ಯಾಯಪೀಠ ಅರ್ಜಿಯನ್ನ ವಜಾಗೊಳಿಸಿದೆ.