ಪ್ರಜಾಸ್ತ್ರ ಸುದ್ದಿ
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಫಲಿತಾಂಶ ಬಂದ ಬಳಿಕ ನಡೆದ ಹಿಂಸಾಚಾರದಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಟಿಎಂಸಿ ಗೂಂಡಾಗಳು ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.
ಜೆ.ಪಿ ನಡ್ಡಾ ಇಂದಿನಿಂದ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಶ ಕೈಗೊಳ್ಳುತ್ತಿದ್ದಾರೆ. ಇದರ ಜೊತೆಗೆ ಮೇ 5ರಂದು ರಾಷ್ಟ್ರವ್ಯಾಪಿ ಧರಣಿಗೆ ಬಿಜೆಪಿ ಕರೆ ನೀಡಿದೆ. ಕೋವಿಡ್ 19 ಸೋಂಕು ದಿನದಿಂದ ದಿನಕ್ಕೆ ತೀವ್ರಗತಿಯಲ್ಲಿ ಹರಡುತ್ತಿದೆ. ಸೋಂಕಿತರ ಜೊತೆಗೆ ಸಾವಿನ ಪ್ರಮಾಣ ಸಹ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ದೇಶ್ಯಾದ್ಯಂತ ಧರಣಿಗೆ ಕರೆ ನೀಡಿರುವುದು ಎಷ್ಟು ಸರಿ ಅನ್ನೋ ಪ್ರಶ್ನೆ ಎದ್ದಿದೆ.