ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಂಡ್ಯ ಭಾಗದಲ್ಲಿ ಅಕ್ರಮ ಗಣಿಗಾರಿಕೆ ತುಂಬಾ ಜೋರಾಗಿ ಕೂಡಿದೆ ಎಂದಿರುವ ಸಂಸದೆ ಸುಮಲತಾ ಅಂಬರೀಶ, ಸೋಮವಾರ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಅವರನ್ನ ಭೇಟಿ ಮಾಡಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.
ಕೆಆರ್ ಎಸ್ ಡ್ಯಾಂ ಬಿರುಕು ಹಾಗೂ ಅಕ್ರಮ ಗಣಿಗಾರಿಕೆ ವಿಚಾರ ಸಂಸದೆ ಸುಮಲತಾ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರ ನಡುವೆ ಸಮರ ನಡೆದಿದೆ. ಇದೀಗ ಗಣಿ ಸಚಿವರನ್ನ ಭೇಟಿಯ ಹಿಂದೆ, ಹಲವು ಮಾಹಿತಿಗಳ ಸಲ್ಲಿಕೆ ಸಾಧ್ಯತೆಯಿದೆ ಎನ್ನಲಾಗ್ತಿದೆ. ಈ ಮೂಲಕ ಸಂಸದೆ ಸುಮಲತಾ ಅವರು, ಅಕ್ರಮ ಗಣಿಗಾರಿಕೆ ನಡೆಸ್ತಿರುವವರ ವಿರುದ್ಧ ಕಾನೂನು ಸಮರ ಸಾರುತ್ತಾರಾ ಅನ್ನೋ ಕುತೂಹಲ ಮೂಡಿದೆ.