ಪ್ರಜಾಸ್ತ್ರ ಸುದ್ದಿ
ಚೆನ್ನೈ: ಮೇಕೆದಾಟು ಯೋಜನೆ ಜಾರಿಗೆ ತರಬೇಕು ಎಂದು ಕರ್ನಾಟಕ ಸರ್ಕಾರ ತಯಾರಿ ನಡೆಸ್ತಿದೆ. ಆದ್ರೆ, ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸಿಕೊಂಡು ಬರ್ತಿರುವ ತಮಿಳುನಾಡು ಈಗ್ಲೂ ತನ್ನ ಕ್ಯಾತೆ ಮುಂದುವರೆಸಿದೆ. ಈ ಬಗ್ಗೆ ಮಾತ್ನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಈ ವಿಚಾರದಲ್ಲಿ ತಮಿಳುನಾಡು ಸರ್ಕಾರಕ್ಕೆ ನಮ್ಮ ಬೆಂಬಲ ಎಂದಿದ್ದಾರೆ.
ಮೇಕೆದಾಟು ಆಣೆಕಟ್ಟು ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ನಾವು ಸ್ಪಷ್ಟವಾಗಿದ್ದೇವೆ. ಕರ್ನಾಟಕದಲ್ಲಿ ನಮ್ಮದೆ ಪಕ್ಷ ಅಧಿಕಾರದಲ್ಲಿದ್ರೂ, ರಾಜ್ಯದ ಜನರ ಹಿತದೃಷ್ಟಿಯಿಂದ ಅವರ ಪರ ನಿಲ್ಲುತ್ತೇವೆ ಎಂದು ಹೇಳುವ ಮೂಲಕ, ಕರ್ನಾಟಕದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.