ಪ್ರಜಾಸ್ತ್ರ ಸುದ್ದಿ
ವಿಜಯಪುರ: ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಸದಾ ವಾಗ್ದಾಳಿ ನಡೆಸ್ತಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇದೀಗ ಹೊಸದೊಂದು ಬಾಂಬ್ ಸಿಡಿಸಿದ್ದಾರೆ. ಸಿಎಂ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಆದ್ರೆ, ಯಡಿಯೂರಪ್ಪ ಬ್ಲ್ಯಾಕ್ ಮೇಲ್ ಬೊಮ್ಮಾಯಿ ಅವರನ್ನ ಸಿಎಂ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಯಡಿಯೂರಪ್ಪ 10 ಸಾವಿರ ಕೋಟಿಗೂ ಹೆಚ್ಚು ಭ್ರಷ್ಟಾಚಾರ ಮಾಡಿದ್ದಾರೆ. ಎಲ್ಲ ಹಗರಣಗಳು ಹೊರಗೆ ಬರುತ್ತೇವೆ ಎಂದುಕೊಂಡು, ಬೊಮ್ಮಾಯಿ ಬಿಟ್ಟು ಯಾರನ್ನಾದ್ರೂ ಸಿಎಂ ಮಾಡಿದ್ರೆ ಸರ್ಕಾರ ಬೀಳಿಸುತ್ತೇನೆ ಎಂದು ಬ್ಲ್ಕಾಕ್ ಮಾಡಿದ್ದಾರೆ. ಆದ್ರೆ, ಬೊಮ್ಮಾಯಿ ಯಡಿಯೂರಪ್ಪನವರನ್ನ ದೂರ ಇಡುತ್ತಾರೆ ನೋಡ್ತಾಯಿರಿ ಎಂದು ಹೇಳಿದ್ರು.