ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಐಪಿಎಲ್ ಬೆಟ್ಟಿಂಗ್ ನಿಂದಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಹಣ್ಣಿನ ವ್ಯಾಪಾರಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೀಳಗಿ ತಾಲೂಕಿನ ಕಾತರಕಿಯ ಸೈಯದ ವಾಳದ(38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಸೈಯದ ವಾಳದ, ಕ್ರಿಕೆಟ್ ಬೆಟ್ಟಿಂಗ್ ನಿಂದಾಗಿ ಸಾಲ ಮಾಡಿಕೊಂಡಿದ್ದ. ಇದನ್ನು ತೀರಿಸಲು ಆಗದೆ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು, ಆಗ್ನಿಶಾಮಕ ಸಿಬ್ಬಂದಿ ಮೃತದೇಹ ಪತ್ತೆ ಕಾರ್ಯ ನಡೆಸಿದ್ದಾರೆ.