ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಈಗಾಗ್ಲೇ 6ನೇ ತರಗತಿಯಿಂದ ಕಾಲೇಜುವರೆಗೂ ತರಗತಿಗಳು ಪ್ರಾರಂಭವಾಗಿವೆ. ಇದೀಗ 1ರಿಂದ 5ನೇ ತರಗತಿವರೆಗೂ ಕ್ಲಾಸ್ ಶುರು ಮಾಡಲು ಸರ್ಕಾರ ಗ್ರೀನ್ ಸಿಗ್ನಿಲ್ ಕೊಟ್ಟಿದೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದೆ.
ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ನಡೆಸಲು ಒಪ್ಪಿಗೆ ನೀಡಲಾಗಿದೆ. ಆದರೆ, ಶಾಲೆಗೆ ಬರಲು ಒತ್ತಾಯ ಮಾಡುವಂತಿಲ್ಲ. ಹಾಜರಾತಿ ಕಡ್ಡಾಯವಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಒಪ್ಪಿಗೆ ಪತ್ರ ಬೇಕು. ಒಂದು ರೂಮಿನಲ್ಲಿ ಶೇಕಡ 50ರಷ್ಟು ವಿದ್ಯಾರ್ಥಿಗಳು ಮಾತ್ರ ಇರಬೇಕು. ಶಾಲೆಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಇರಬೇಕು. ಶಿಕ್ಷಕರು ಎರಡೂ ಡೋಸ್ ಲಸಿಕೆ ಪಡೆದಿರಬೇಕು ಎಂದು ಸೂಚಿಸಲಾಗಿದೆ.