ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕೋಳಿ ಸಮಾಜದಲ್ಲಿ ಬರುವ ತಳವಾರ ಹಾಗೂ ಪರಿವಾರ ಸಮಾಜದವರಿಗೆ ಎಸ್ಟಿ ಪ್ರಮಾಣಪತ್ರ ನೀಡಬಾರದು ಎಂದು ವಿಜಯಪುರ ಜಿಲ್ಲಾ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ.
ನಾಯಕ ವಾಲ್ಮೀಕಿ ಉಪ ಪಂಗಡಗಳಾದ ತಳವಾರ ಹಾಗೂ ಪರಿವಾರ ಜಾತಿಗಳಿಗೆ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡುವುದನ್ನು ಬಿಟ್ಟು ಇತರೆ ಹಿಂದುಳಿದ ವರ್ಗಗಳಲ್ಲಿ ಬರುವ ತಳವಾರ ಹಾಗೂ ಪರಿಹಾರ ಜಾತಿಗಳಿಗೆ ಎಸ್ಟಿ ಪ್ರಮಾಣಪತ್ರ ನೀಡಬಾರದು. ಒಂದು ವೇಳೆ ನೀಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಅಧ್ಯಕ್ಷ ರವೀಂದ್ರ ಹಣಮಂತಪ್ಪ ಭಗವಂತಪ್ಪನವರ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಗಿದೆ.