ಪ್ರಜಾಸ್ತ್ರ ಸುದ್ದಿ
ಉಡುಪಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಶೇಕಡ 40ರಷ್ಟು ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಉಡುಪಿಯ ಶಾಂಭವಿ ಹೋಟೆಲ್ ನಲ್ಲಿ ಸಂತೋಷ್ ಪಾಟೀಲ್ ಮೃತದೇಹ ಪತ್ತೆಯಾಗಿದೆ.
ರೂಮ್ ನಂಬರ್ 207ರಲ್ಲಿ ಸಂತೋಷ್ ಸೂಸೈಡ್ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಪ್ರಕರಣ ರಾಜ್ಯ ಸರ್ಕಾರ ಹಾಗೂ ಸಚಿವ ಈಶ್ವರಪ್ಪಕ್ಕೆ ದೊಡ್ಡ ಹೊಡೆತ ಕೊಡುವುದು ಮಾತ್ರ ಫಿಕ್ಸ್ ಆಗಿದೆ.