ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಸೋಮವಾರ ಪ್ರಕಟಿಸಿದೆ. ಅಂತಿಮ ಪಟ್ಟಿ ಪ್ರಕಟವಾಗುತ್ತಿದ್ದಂತೆ ಅಸಮಾಧಾನ, ಆಕ್ರೋಶ ವ್ಯಕ್ತವಾಗುತ್ತಿವೆ. ಕಾಂಗ್ರೆಸ್ ಹಿರಿಯ ನಾಯಕರು, ಟಿಕೆಟ್ ಆಕಾಂಕ್ಷಿಗಳು ಕೆಂಡಾಮಂಡಲವಾಗಿದ್ದಾರೆ.
ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬರ್, ಬಿಎಂಟಿಸಿ ಮಾಜಿ ಅಧ್ಯಕ್ಷ ನಾಗರಾಜ್ ಯಾದವ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಹೀಗಾಗಿ ಎಸ್.ಆರ್ ಪಾಟೀಲ, ನಾಸೀರ್, ನಜೀರ್ ಅಹ್ಮದ್ ಬೆಂಬಲಿಗರು ಅಸಮಾಧಾನ ಹೊರ ಹಾಕಿದ್ದಾರೆ.