ಪ್ರಜಾಸ್ತ್ರ ಅಪರಾಧ ಸುದ್ದಿ
ಹಾಸನ: ನಗರಸಭೆಯ ಜೆಡಿಎಸ್ ಸದಸ್ಯ ಪ್ರಶಾಂತ್ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೂರ್ಣಚಂದ್ರ ಹಾಗೂ ಅರುಣ್ ಬಂಧಿತ ಆರೋಪಿಗಳಾಗಿದ್ದಾರೆ.
16ನೇ ವಾರ್ಡ್ ಶಾಂತಿನಗರದ ಜೆಡಿಎಸ್ ಸದಸ್ಯ ಪ್ರಶಾಂತ್, ನಗರದ ಜೇವನಹಳ್ಳಿ ಮಠದ ಹತ್ತಿರ ಬೈಕ್ ನಲ್ಲಿ ಹೋಗುತ್ತಿದ್ದಾಗ ಆಟೋದಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಇದೀಗ ಇಬ್ಬರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಬಂಧನ ಕಾರ್ಯ ನಡೆದಿದೆ.