ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಎನ್ಐಎ ಬರೋಬ್ಬರಿ ಒಂದು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ಇದರಲ್ಲಿ 10 ಆರೋಪಿಗಳ ಹೆಸರನ್ನು ಉಲ್ಲೇಖಿಸಲಾಗಿದೆ.
ಹಿಂದೂ ಸಂಘಟನೆಗಳ ಉಪಟಳದಿಂದ, ಹಳೆ ದ್ವೇಷದ ಕಾರಣಕ್ಕೆ ಹರ್ಷ ಕೊಲೆ ಮಾಡಲಾಗಿದೆ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನು ಕಳೆದ ಫೆಬ್ರವರಿ 21ರ ರಾತ್ರಿ ಹತ್ಯೆ ಮಾಡಲಾಗಿತ್ತು. ಇದಾದ ಬಳಿಕ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಯಿತು.
ಆರಂಭದಲ್ಲಿ ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರು ನಡೆಸಿದರು. ನಂತರ ಸಿಐಡಿಗೆ ಹೋಯಿತು. ಇದಾದ ಮೇಲೆ ರಾಜ್ಯ ಸರ್ಕಾರ ಎನ್ಐಎಗೆ ವರ್ಗಾಯಿಸಿತು. ಎನ್ಐಎ ತಂಡ ತನಿಖೆ ನಡೆಸಿ ಇದೀಗ ಚಾರ್ಜ್ ಶೀಟ್ ಸಲ್ಲಿಸಿದೆ.