ಪ್ರಜಾಸ್ತ್ರ ಅಪರಾಧ ಸುದ್ದಿ
ಕಲಬುರಗಿ: ಕೆಲ ದಿನಗಳ ಹಿಂದೆಯಷ್ಟೇ ಯುವಕನ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹತ್ಯೆ ನಡೆದಿದೆ. ಬಸಂತ ನಗರದಲ್ಲಿ ಯುವಕನೊಬ್ಬನನ್ನು ಕಳೆದ ರಾತ್ರಿ ಹತ್ಯೆ ಮಾಡಲಾಗಿದೆ.
ಸಂತೋಷ ಕಾಲೋನಿ ನಿವಾಸಿ ಲಕ್ಷ್ಮಿಪುತ್ರ(35) ಕೊಲೆಯಾದ ಯುವಕ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಅಶೋಕ ನಗರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.