ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಕೊನೆಯ ಚಿತ್ರ ಗಂಧದಗುಡಿ ಟ್ರೇಲರ್ ಈಗಾಗ್ಲೇ ಬಿಗ್ ಸಕ್ಸಸ್ ಕಂಡಿದೆ. ಪ್ರತಿಯೊಬ್ಬರು ಮೆಚ್ಚಿಕೊಂಡಿದ್ದಾರೆ. ಅಕ್ಟೋಬರ್ 28ಕ್ಕೆ ಥಿಯೇಟರ್ ಗೆ ಲಗ್ಗೆ ಇಡುತ್ತಿದೆ. ಇದಕ್ಕೂ ಮೊದಲು ಪ್ರಿ ರಿಲೀಸ್ ಇವೆಂಟ್ ಮಾಡಲಾಗುತ್ತಿದೆ.
ಅಕ್ಟೋಬರ್ 21ಕ್ಕೆ ಗಂಧದಗುಡಿ ಪ್ರಿ ರಿಲೀಸ್ ಇವೆಂಟ್ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ. ಪುನೀತ್ ಪತ್ನಿ ಅಶ್ವಿನಿ, ಅಣ್ಣ ರಾಘವೇಂದ್ರ ರಾಜಕುಮಾರ್, ಇವರ ಮಗ ಯುವ ರಾಜಕುಮಾರ್ ಆಹ್ವಾನ ನೀಡಿದರು. ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಉಪಸ್ಥಿತರಿದ್ದರು.