ಪಜ್ರಾಸ್ತ್ರ ಸುದ್ದಿ
ಮಂಡ್ಯ: ಕೆಎಸ್ಆರ್ ಟಿಸಿ ಬಸ್ಸೊಂದು ಗದ್ದೆಗೆ ನುಗ್ಗಿ ಅಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಕಿಕ್ಕೇರಿ ಹತ್ತಿರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ. ಸ್ಟೇರಿಂಗ್ ಕಟ್ ಆದ ಪರಿಣಾಮ ಈ ಅವಘಡ ಸಂಭವಿಸಿದೆ.
11 ಕೆ.ವಿ ಲೈನ್ ಇರುವ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಂಬ ಕಟ್ ಆಗಿ ಬಸ್ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಏನು ಆಗಿಲ್ಲ. ಸಣ್ಣಪುಟ್ಟ ಗಾಯಗಳಾಗಿದ್ದು, ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.