ಪ್ರಜಾಸ್ತ್ರ ಸುದ್ದಿ
ಮಂಡ್ಯ: ಕಾರ್ಯಕ್ರಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಫೋಟೋಗ್ರಾಫರ್ ಗಳಿಗೆ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ನಡೆದಿದೆ. ಮಧುಸೂದನ್ ಹಾಗೂ ವಿವೇಕ್ ಮೃತ ದುರ್ದೈವಿಗಳು.
ವಿದ್ಯುತ್ ಪ್ರವಹಿಸಿದ್ದು ಹೇಗೆ, ಘಟನೆಗೆ ಏನು ಕಾರಣ ಅನ್ನೋದರ ಕುರಿತು ತನಿಖೆ ನಡೆಯುತ್ತಿದೆ. ಛಾಯಾಗ್ರಾಹಕರ ನಿಧನದಿಂದಾಗಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಕುಟುಂಬಸ್ಥರು ಕಣ್ಣೀರು ಮುಗಿಲು ಮುಟ್ಟಿದೆ.