ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮೈಸೂರು ದಸರಾ ಜಂಬೂಸವಾರಿಯ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದ ಆನೆ ಗೋಪಾಲಸ್ವಾಮಿ, ಶಿಬಿರದಲ್ಲಿ ಕಾಡಾನೆ ಜೊತೆಗೆ ಕಾದಾಟ ನಡೆಸಿ ಮೃತಪಟ್ಟಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರಿನ ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ಜೊತೆ ಕಾದಾಟ ನಡೆಸಿ ತೀವ್ರವಾಗಿ ಗಾಯಗೊಂಡಿತ್ತು. ಇದೀಗ ಆನೆ ಗೋಪಾಲಸ್ವಾಮಿ ನಿಧನ ಹೊಂದಿದೆ.