ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಇಲ್ಲಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಇದಕ್ಕಾಗಿ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇದರ ನಡುವೆ ಎಂಇಎಸ್ ಎಂದಿನಂತೆ ತನ್ನ ಹಳೆ ಚಾಳಿ ಮುಂದುವರೆಸಿದ್ದು, ಅಧಿವೇಶನ ವಿರೋಧಿಸಿ ನಾಳೆ ಪ್ರತಿಭಟನೆಗೆ ಮುಂದಾಗಿದೆ.
ಎಂಇಎಸ್ ಮಹಾಮೇಳವ್ ಗೆ ಬರುತ್ತಿದ್ದೇನೆ. ಸೂಕ್ತ ಭದ್ರತೆ ಕೊಡಿ ಎಂದು ಪೊಲೀಸ್ ಆಯುಕ್ತರಿಗೆ ಮಹಾರಾಷ್ಟ್ರ ಸಂಸದ ಪತ್ರ ಬರೆದಿದ್ದಾರೆ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹ ಸಚಿವರು ಸಭೆ ನಡೆಸಿದ್ದು, ಸಮಿತಿ ರಚನೆಗೆ ಮುಂದಾಗಿದ್ದಾರೆ. ಆದರೆ, ಎಂಇಸಿ ತನ್ನ ಪುಂಡಾಟ ನಡೆಸಲು ಮುಂದಾಗಿದ್ದು, ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ. ಇದನ್ನು ರಾಜ್ಯ ಪೊಲೀಸ್ ಇಲಾಖೆ ಹೇಗೆ ಮಟ್ಟ ಹಾಕುತ್ತೆ ಅನ್ನೋ ಕುತೂಹಲ ಮೂಡಿದೆ.