ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಈ ವೇಳೆ ಹಲವು ಯೋಜನೆಗಳಿಗೆ ಒಪ್ಪಿಗೆ ಸಿಕ್ಕಿದ್ದು, ಅವುಗಳನ್ನು ಘೋಷಿಸಲಾಗಿದೆ. ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.
ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಫೆಬ್ರವರಿ 10 ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ 600 ಕೋಟಿ ಅನುದಾನ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ಸ್ಪೂರ್ತಿ ಯೋಜನೆಗೆ 12.5 ಕೋಟಿ ರೂಪಾಯಿ ನೀಡಲು ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ.
ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ 50 ಬೆಡ್ ಗಳ ಆಸ್ಪತ್ರೆಯನ್ನು 100 ಬೆಡ್ ಗೆ ಏರಿಕೆಗೆ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣ ನವೀಕರಣಕ್ಕಾಗಿ 63 ಕೋಟಿ ಅನುದಾನಕ್ಕೆ ಒಪ್ಪಿಗೆ.
ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಒಬಿಸಿ ಶಾಲೆ ನಿರ್ಮಾಣ ಹಾಗೂ ನಾರಾಯಣಗುರುಗಳ ಹೆಸರಿನಲ್ಲಿ ಒಬಿಸಿ ಶಾಲೆ ನಿರ್ಮಾಣಕ್ಕೆ 715 ಕೋಟಿ ಅನುದಾನ.
ಹೀಗೆ ಈ ಎಲ್ಲ ಪ್ರಮುಖ ವಿಚಾರಗಳ ಕುರಿತು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.