ಪ್ರಜಾಸ್ತ್ರ ಅಪರಾಧ ಸುದ್ದಿ
ಮಂಡ್ಯ: ತಾಲೂಕು ಕಚೇರಿಯಲ್ಲಿಯೇ ವ್ಯಕ್ತಿಯೊಬ್ಬನ ಮೇಲೆ ಕುಡುಗೋಲಿನಿಂದ ದಾಳಿ ನಡೆಸಿ ಹತ್ಯೆಗೆ ಯತ್ನಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಚಿನ್ನರಾಜ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಚಿಂತಾಜನಕವಾಗಿದೆ.
ಚಿನ್ನರಾಜ್ ಹಾಗೂ ನಂದನ್ ಎಂಬುವರ ನಡುವೆ ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಜಿಲ್ಲೆಯ ಮದ್ದೂರು ತಾಲೂಕು ಕಚೇರಿಗೆ ಬಂದಿದ್ದರು. ಚಿನ್ನರಾಜ್ ಪರ ತೀರ್ಪು ಬರುತ್ತಿದ್ದಂತೆ ಜಗಳ ಶುರುವಾಗಿದೆ. ಆಗ ನಂದನ್ ಎಂಬಾತ ಕುಡುಗೋಲಿನಿಂದ 40ಕ್ಕೂ ಹೆಚ್ಚು ಬಾರಿ ಹಲ್ಲೆ ಮಾಡಿದ್ದಾನೆ.
ಘಟನೆಯ ವೇಳೆ ಜನರು ಬಿಡಿಸಲು ಪ್ರಯತ್ನಿಸಿದರೂ ಆಗಲಿಲ್ಲ. ನಂತರ ನಂದನ್ ಮೇಲೆ ಕಲ್ಲು ತೂರಾಟ ನಡೆಸಿ ರಕ್ಷಿಸಲಾಗಿದೆ. ನಂದನ್ ಸಹ ಗಾಯಗೊಂಡಿದ್ದಾನೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.