ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಒಂದು ಮತಕ್ಕೆ 6 ಸಾವಿರ ರೂಪಾಯಿ ಕೊಡುತ್ತೀನಿ ಎಂದು ಬಹಿರಂಗವಾಗಿ ಹೇಳಿದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ದೂರು ಸಲ್ಲಿಸಿದೆ.
ಜಾರಕಿಹೊಳಿ ಹೇಳಿಕೆ ಹಿಂದೆ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ರಾಜ್ಯಾಧ್ಯಕ್ಷ ಕಟೀಲ್ ಅವರ ಪಿತೂರಿ ಇದೆ. ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಮತಗಳನ್ನು ಖರೀದಿಸುತ್ತೆ ಎಂದು ಸರ್ಜೇವಾಲ್ ಕಿಡಿ ಕಾರಿದ್ದಾರೆ.