ಪ್ರಜಾಸ್ತ್ರ ಸುದ್ದಿ
ವಿಜಯಪುರ: ಇತ್ತೀಚೆಗೆ ಯಡಿಯೂರಪ್ಪ ಸುಮಾರು ಐದಾರು ಹಾಲಿ ಶಾಸಕರಿಗೆ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದ ಮಾತು, ದೊಡ್ಡ ಚರ್ಚೆ ಹುಟ್ಟು ಹಾಕಿದೆ. ಜೊತೆಗೆ ಬಿಜೆಪಿ ನಾಯಕರಲ್ಲಿ ಢವಢವ ಶುರುವಾಗಿದೆ. ಈ ಐದಾರು ಜನರಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದ ಮಹೇಶ ಕುಮಟಳ್ಳಿ ಒಬ್ಬರು ಎಂದು ಹೇಳಲಾಗುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಮೇಶ ಜಾರಕಿಹೊಳಿ, ಅವರಿಗೆ ಟಿಕೆಟ್ ಕೊಡದಿದ್ದರೆ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಗರದಲ್ಲಿ ನಡೆಯುತ್ತಿದೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಟಳ್ಳಿಗೆ ಟಿಕೆಟ್ ಕೊಡದಿದ್ದರೆ ನಾನು ಚುನಾವಣೆಗೆ ನಿಲ್ಲಲ್ಲ. ಬೆಳಗಾವಿಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಈ ಬಾರಿ ಇನ್ನು ಎರಡು ಸ್ಥಾನ ಹೆಚ್ಚಿಗೆ ಗೆಲ್ಲಿಸುವ ಪ್ರಯತ್ನ ಮಾಡುವೆ ಎಂದರು.
ಸಚಿವ ನಾರಾಯಣಗೌಡ ವಾಪಸ್ ಕಾಂಗ್ರೆಸ್ ಗೆ ಹೋಗುವ ವಿಚಾರದ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಳುಗುವ ಹಡಗು. ಈಗ ಹೋಗಿ ಏನು ಮಾಡೋದು. ನಾನು ಬಿಜೆಪಿ ತತ್ವ ಸಿದ್ಧಾಂತ ಒಪ್ಪಿಕೊಂಡು ಬಂದಿದ್ದೇನೆ ಎಂದರು.