ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಕಾಂಗ್ರೆಸ್ ಗೆ ಬಹುಶಃ 65 ಸ್ಥಾನಗಳು ಬರಬಹುದು. ಅದನ್ನು ಡಿ.ಕೆ ಶಿವಕುಮಾರ್ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿದರು. ಈ ಮೂಲಕ ಬಿಜೆಪಿ 65 ಸ್ಥಾನಗಳಲ್ಲಿ ಗೆಲ್ಲುತ್ತೆ ಅನ್ನೋ ಡಿ.ಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು.
ನಗರದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಬೂತ್ ಮಟ್ಟದಲ್ಲಿಯೇ ಗಟ್ಟಿಯಾದ ಸಂಘಟನೆ ಇದೆ. 224 ಕ್ಷೇತ್ರಗಳಲ್ಲಿಯೂ ಒಂದಲ್ಲ ಒಂದು ಕೆಲಸಗಳು ನಡೆಯುತ್ತಿವೆ. ಈಗಾಗ್ಲೇ 3ನೇ ಹಂತದ ಪ್ರಚಾರ ನಡೆಯುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ ಹಾಗೂ ನನ್ನ ಕೆಲಸಗಳು ಸೇರಿ ಅಭಿವೃದ್ಧಿ ಕೆಲಸಗಳಿಗೆ ದೊಡ್ಡ ಮಟ್ಟದ ಬೆಂಬಲ ಸಿಗುತ್ತಿದೆ ಎಂದರು.
ಜನಾರ್ಧನ್ ರೆಡ್ಡಿ ಹಾಗೂ ಸುಮಲತಾ ಅಂಬರೀಶ್ ಬಿಜೆಪಿಗೆ ಬರುವ ವಿಚಾರದ ಬಗ್ಗೆ ಮಾತನಾಡಿದ ಅವರು, ಜನಾರ್ಧನ್ ರೆಡ್ಡಿ ಅವರು ಮೂರು ದಶಕಗಳಿಂದ ರಾಜಕೀಯದಲ್ಲಿದ್ದಾರೆ. ಬಿಜೆಪಿಗೆ ಹಳೆಯ ಸಂಬಂಧವಿರುವುದು ಸತ್ಯ. ಅವರ ನಿರ್ಣಯವನ್ನು ಅವರು ತೆಗೆದುಕೊಳ್ಳುತ್ತಾರೆ. ಇನ್ನು ಸಂಸದೆ ಸುಮಲತಾ ಅಂಬರೀಶ್ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಹಲವು ಚರ್ಚೆಗಳು ನಡೆದಿವೆ. ಅಂತಿಮ ನಿರ್ಧಾರ ಅವರು ಪ್ರಕಟಿಸಲಿದ್ದಾರೆ ಅಂತಾ ತಿಳಿಸಿದರು.