ಪ್ರಜಾಸ್ತ್ರ ಸುದ್ದಿ
ಮಂಡ್ಯ: ಸಕ್ಕರೆನಾಡಿನಲ್ಲಿ ಜೆಡಿಎಸ್ ಪಕ್ಷಕ್ಕೆ ಚುನಾವಣೆ ಹೊತ್ತಿನಲ್ಲಿ ಬಿಗ್ ಶಾಕ್ ನೀಡಿದಂತಾಗಿದೆ. ಬರೋಬ್ಬರಿ 200ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ದಳದ ನಾಯಕರಿಗೆ ಮತ್ತಷ್ಟು ಟೆನ್ಷನ್ ನೀಡಿದ್ದಾರೆ.
ಮಾಜಿ ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ನೇತೃತ್ವದಲ್ಲಿ ಶ್ರೀರಂಗಪಟ್ಟಣದ ಖಾಸಗಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮೂಹಿಕವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಜೆಡಿಎಸ್ ಭದ್ರಕೋಟೆಯಲ್ಲಿ ಹೊಸ ಅಲೆ ಎದ್ದಿದೆ.